Districts

ಚಡ್ಡಿ ಬಗ್ಗೆ ಟೀಕೆ ಸಿದ್ದರಾಮಯ್ಯ ಅವರಿಗೆ ಶೋಭೆ ತರಲ್ಲ; ಯಡಿಯೂರಪ್ಪ

ಬಾಗಲಕೋಟೆ: ಆರ್‌ಎಸ್‌ಎಸ್ ಹಾಗೂ ಚಡ್ಡಿ ಬಗ್ಗೆ‌‌ ವಿಧಾನಸಭೆ ವಿರೋಧ ಪಕ್ಷದ‌ ನಾಯಕ ಸಿದ್ದರಾಮಯ್ಯ ಮಾಡಿರುವ ಟೀಕೆ‌ ಯಾರಿಗೂ ಶೋಭೆ‌ ತರುವಂತಹದಲ್ಲ ಎಂದು‌ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ವಿರೋಧ‌ ಪಕ್ಷದ‌ ನಾಯಕರಾಗಿ ಗೌರವದಿಂದ ನಡೆದುಕೊಳ್ಳುತ್ತಾರೆ ಎಂ‌ಬ ನಿರೀಕ್ಷೆ ಮಾಡಿದ್ವಿ. ಈಗ‌ ಅವರು ಮಾಡುತ್ತಿರುವ‌ ಟೀಕೆಯಿಂದ‌ ಅವರಿಗಿರುವ ಗೌರವವು ಹಾಳಾಗುತ್ತದೆ ಎಂದರು.

ಪಠ್ಯ ಪರಿಷ್ಕರಣೆಯಲ್ಲಿ ಲೋಪಗಳಾಗಿದ್ದರೆ, ಸರಿಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಯಡಿಯೂರಪ್ಪ ಉತ್ತರಿಸಿದರು.

Share Post