CrimeDistricts

ಲೋಕಸಭೆಯಲ್ಲಿ ಭದ್ರತಾಲೋಪ ಹಿನ್ನೆಲೆ; ಬೆಳಗಾವಿ ಸುವರ್ಣಸೌಧದಲ್ಲಿ ಹೈ ಅಲರ್ಟ್‌

ಬೆಳಗಾವಿ; ಇಂದು ಇಬ್ಬರು ಯುವಕರು ,ಲೋಕಸಭಾ ಕಲಾಪಕ್ಕೆ ನುಗ್ಗಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಎಲ್ಲೆಡೆ ಪರಿಶೀಲನೆ  ನಡೆದಿದೆ. ಖುದ್ದು ಸ್ಪೀಕರ್ ಯು.ಟಿ. ಖಾದರ್ ಅವರೇ ಸುವರ್ಣಸೌಧದ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುವರ್ಣ ಸೌಧದ ಮಾರ್ಷಲ್​ಗಳು ಪರಿಶೀಲನೆ ಮಾಡಿದ್ದಾರೆ. ಅನಂತರ ಇವರಿಂದ ಭದ್ರತೆ ಬಗ್ಗೆ ಸ್ಪೀಕರ್‌ ಮಾಹಿತಿ ಪಡೆದುಕೊಂಡಿದ್ದಾರೆ..

Share Post