CrimeDistricts

ಉಗ್ರಗಾಮಿ ಚಟುವಟಿಕೆ ಹಿನ್ನೆಲೆ; ಮತ್ತಿಬ್ಬರು ಶಂಕಿತರ ಅರೆಸ್ಟ್

ಶಿವಮೊಗ್ಗ; ಉಗ್ರ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ರಾಜ್ಯದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ತುಂಗಾ ತಟದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣ ಮತ್ತು ಐಎಸ್​ಐಎಸ್​ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆಂಬ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಪೆರ್ಮಣ್ಣೂರಿನ ಮಜಿನ್ ಅಬ್ದುಲ್ ರಹಮಾನ್ ಮತ್ತು ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ನದೀಂ ಅಹ್ಮದ್ ಬಂಧಿತರ ಶಂಕಿತ ಉಗ್ರರು. ಇವರಿಬ್ಬರೂ ಮಾಜ್​ ಮುನೀರ್, ಸೈಯದ್ ಯಾಸೀನ್ ಜೊತೆ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಮಾಜ್​ ಮುನೀರ್, ಸೈಯದ್ ಯಾಸೀನ್ ಈ ಇಬ್ಬರನ್ನು ಉಗ್ರ ಚಟುವಟಿಕೆಗಳಿಗೆ ನೇಮಿಸಿಕೊಂಡಿದ್ದರು. ಈಗಾಗ್ಲೇ ಎನ್​ಐಎ ಇವರಿಬ್ಬರು ಸೇರಿ ನಾಲ್ವರನ್ನು ಬಂಧಿಸಿದೆ.

Share Post