DistrictsNationalPolitics

ಬಜರಂಗದಳ ಬ್ಯಾನ್‌ ಅನ್ನೋದು ಕಾಂಗ್ರೆಸ್‌ನ ತಿರುಕನ ಕನಸು; ಯಡಿಯೂರಪ್ಪ

ಮೈಸೂರು; ಬಜರಂಗದಳವನ್ನು ಯಾವ ಕಾರಣಕ್ಕೂ ಬ್ಯಾನ್‌ ಮಾಡೋದಕ್ಕೆ ಸಾಧ್ಯವೇ ಇಲ್ಲ. ಅದು ಕಾಂಗ್ರೆಸ್‌ನ ತಿರುಕನ ಕನಸು ಎಂದು ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ವಿನಾಶಕಾಲೇ ವಿಪರೀತ ಬುದ್ಧಿ ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬಾರದವರು ಏನು ಬೇಕಾದರೂ ಭರವಸೆ ನೀಡಬಹುದು. ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ, ಬಜರಂಗದಳ ನಿಷೇಧ ಪ್ರಶ್ನೆಯೇ ಇಲ್ಲ. ಈ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ ನಾಯಕರು ಸುಮ್ಮನೆ ತಿರುಕನ ಕನಸು ಕಾಣುತ್ತಿದ್ದಾರೆ. ಈ ಕಾರಣದಿಂದಾಗಿ ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್‌ನ ಕನಸು ನನಸಾಗೋದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Share Post