Districts

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ದ್ವಿಚಕ್ರ ವಾಹನಗಳಿಗೆ ನಿಷೇಧ

ರಾಮನಗರ; ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಆಗಸ್ಟ್‌ 1ರಿಂದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿವೆ ಅವಕಾಶವಿರುವುದಿಲ್ಲ. ಈಗಾಗಲೇ ಇದಕ್ಕೆ ಜುಲೈ 12 ರಂದೇ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಲಾಗಿದೆ. ಆಗಸ್ಟ್‌ 1ರಿಂದ ನಿಯಮ ಅನ್ವಯವಾಗಲಿದೆ. ಇದನ್ನು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತ ತಡೆಯಲು ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಇದರ ಭಾಗವಾಗಿ, ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ನಿಷೇಧ ಮಾಡಲಾಗುತ್ತಿದೆ. ಎರಡನೇ ಬಾರಿ ಪರಿಶೀಲನೆ ನಡೆಸಿದ ನಂತರ ಅಲೋಕ್‌ ಕುಮಾರ್‌ ಈ ವಿಷಯವನ್ನು ಹೇಳಿದ್ದಾರೆ.

 

Share Post