Districts

ಉದ್ಯಮಿ ಆರ್‌.ಎನ್‌.ನಾಯಕ್‌ ಹತ್ಯೆ ಪ್ರಕರಣ; ನಾಲ್ವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣದಲ್ಲಿ ದೋಷಿಗಳಾಗಿರುವ ನಾಲ್ವರಿಗೆ ಬೆಳಗಾವಿ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಶಿಕ್ಷೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.  

ಒಂಬತ್ತು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ ನಾಯಕ್ ಹತ್ಯೆಯಾಗಿತ್ತು. 2013ರ ಡಿಸೆಂಬರ್ 21 ರಂದು 3 ಕೋಟಿ ಹಫ್ತಾ ನೀಡದಿದ್ದಕ್ಕೆ ಆರ್.ಎನ್. ನಾಯಕ್ ಕೊಲೆ ಮಾಡಲಾಗಿತ್ತು. ಸುಪಾರಿ ನೀಡಿ ಈ ಕೊಲೆ ಮಾಡಿಸಲಾಗಿತ್ತು. ಈ ಪ್ರಕರಣವನ್ನು ಕೋಕಾ ಕಾಯ್ದೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಕೋಕಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಿಕ್ಷೆಯಾಗಿದೆ.

ಜೀವಾವಧಿ ಶಿಕ್ಷೆಗೊಳಗಾದ ನಾಲ್ವರು ಅಪರಾಧಿಗಳು

A-2 ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್
A-3 ಬೆಂಗಳೂರಿನ ಅಭಿ ಬಂಡಗಾರ್,
A-4 ಉಡುಪಿಯ ಗಣೇಶ್ ಭಜಂತ್ರಿ
A-9 ಉಡುಪಿಯ ಬನ್ನಂಜೆ ರಾಜಾ

Share Post