DistrictsPolitics

ನಾಮಪತ್ರ ಸಲ್ಲಿಸಿದ ಬಸವರಾಜ ಬೊಮ್ಮಾಯಿ; ದ್ಯಾಮವ್ವ ದೇವಿಗೆ ವಿಶೇಷ ಪೂಜೆ

ಹಾವೇರಿ; ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಶಿಗ್ಗಾಂವಿ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಸಿಎಂ ಅವರು ದ್ಯಾಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ನನ್ನ ವಿರುದ್ಧ ಯಾರೇ ಅಭ್ಯರ್ಥಿಯಾದರೂ ನಾನು ನಿರ್ಲಕ್ಷ್ಯ ಮಾಡೋದಿಲ್ಲ. ಜನರು ನನ್ನ ಬೆಂಬಲಕ್ಕಿದ್ದಾರೆ ಎಂದು ನಂಬಿದ್ದೇನೆ ಅಂತ ಸಿಎಂ ಬೊಮ್ಮಾಯಿ ಹೇಳಿದರು. ಇನ್ನು ಇದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಆದ್ರೆ ಏಪ್ರಿಲ್‌ 19ರಂದು ಪಕ್ಷದ ಕಾರ್ಯಕರ್ತರೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ.

Share Post