Districts

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ; ದೆಹಲಿಯಿಂದ ಕರೆ ನಿರೀಕ್ಷೆ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂದ ದೆಹಲಿಯಿಂದ ಕರೆ ನಿರೀಕ್ಷೆ ಮಾಡುತ್ತಿದ್ದೇವೆ. ದೆಹಲಿ ಹೈಕಮಾಂಡ್‌ನಿಂದ ಕರೆ ಬಂದರೆ ದೆಹಲಿಗೆ ಹೋಗಿ ಈ ಬಗ್ಗೆ ಮಾತುಕತೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,

ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬೇಡಿಕೆ ಇದೆ. ಈ ವಿಚಾರವನ್ನು ಹೈಕಮಾಂಡ್‌ಗೂ ಮನವರಿಕೆ ಮಾಡಿಕೊಟ್ಟಿದ್ದೇವೆ. ಹೈಕಮಾಂಡ್‌ ಕರೆಗಾಗಿ ಕಾಯುತ್ತಿದ್ದೇವೆ. ಹೈಕಮಾಂಡ್‌ನಿಂದ ಕರೆ ಬಂದರೆ ಕೂಡಲೇ ದೆಹಲಿಗೆ ತೆರಳುತ್ತೇವೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

Share Post