CrimeDistricts

ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ

ಬೆಳಗಾವಿ; ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮಠದಲ್ಲೇ ಅವರು ನೇಣಿಗೆ ಶರಣಾಗಿದ್ದು, ಬೆಳಗ್ಗೆ ಭಕ್ತರಿಗೆ ಈ ವಿಷಯ ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ

ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಡಿವಾಳೇಶ್ವರ ಮಠ ಇದೆ. ಈ ಮಠದಲ್ಲೇ ಸ್ವಾಮೀಜಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುರುಘಾ ಶರಣರು ಬಂಧನವಾದ ಮೇಲೆ ಇಬ್ಬರು ಮಹಿಳೆಯರು ಸ್ವಾಮಿಗಳ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್‌ ಆಗಿತ್ತು. ಆ ವಿಡಿಯೋದಲ್ಲಿ ಮಹಿಳೆಯೊಬ್ಬರು ಬಸವಸಿದ್ಧಲಿಂಗ ಸ್ವಾಮೀಜಿಯವರ ಬಗ್ಗೆಯೂ ಮತನಾಡಿದ್ದರು. ಇದರಿಂದಾಗಿಯೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Share Post