Districts

ಎಂಇಎಸ್‌ ಪುಂಡರ ಕಲ್ಲು ತೂರಾಟ ಹಿನ್ನೆಲೆ: ಬೆಳಗಾವಿಯಲ್ಲಿ ನಿಷೇಧಾಜ್ಞೆ

ಬೆಳಗಾವಿ: ಎಂಇಎಸ್‌ ಪುಂಡರು ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಯಾರೂ ಕೂಡಾ ರಸ್ತೆಗಳಲ್ಲಿ ಗುಂಪು ಸೇರಿವುದು, ಚರ್ಚೆ ನಡೆಸುವುದು ಮಾಡಬಾರದೆಂದು ಸೂಚನೆ ನೀಡಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದು, ಅನುಮಾನಾಸ್ಪದವಾಗಿ ಓಡಾಡುತ್ತಿರುವವರಿಗೆ ಎಚ್ಚರಿಕೆ ನೀಡಲಾಗುತ್ತಿದೆ.

 

Share Post