CrimeDistricts

ಬಸವಸಿದ್ಧಲಿಂಗ ಸ್ವಾಮೀಜಿ ಬರೆದ ಡೆತ್‌ನೋಟ್‌ನಲ್ಲಿ ಏನಿದೆ..?

ಬೆಳಗಾವಿ; ಆತ್ಮಹತ್ಯೆಗೆ ಶರಣಾಗಿರುವ ಗುರು ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಅವರು ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಅದರಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡಬೇಡಿ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಆದರೆ ಡೆತ್ ನೋಟ್‌ನಲ್ಲಿ ಸ್ವಾಮೀಜಿ ಸಹಿ ಇಲ್ಲ.

ಡೆತ್ ನೋಟದಲ್ಲಿ ಏನೇನಿದೆ?
‘ಕ್ಷಮಿಸಿಬಿಡಿ ಭಕ್ತರೆ. ನಾನು ಯಾವುದೇ ತಪ್ಪನ್ನು ಮಾಡಿಲ್ಲ. ನನ್ನ ಸಾವಿಗೆ ನಾನೇ ಕಾರಣ. ಯಾರನ್ನೂ ವಿಚಾರಣೆಗೊಳಪಡಿಸಬೇಡಿ. ಈ ಲೋಕದ ಗೊಡವೆ ಸಾಕು. ನಾ ಈ ದಾರಿ ಹಿಡಿದಿದ್ದೇನೆ. ಶ್ರೀಮಠದ ಭಕ್ತರು ಹಾಗೂ ನೇಗಿನಹಾಳ ಗ್ರಾಮಸ್ಥರು ಎಲ್ಲರೂ ಸೇರಿಕೊಂಡು ಶ್ರೀಮಠವನ್ನು ಮುನ್ನಡೆಸಿ. ಹಡೆದ ತಾಯಿ ನನ್ನನ್ನು ಕ್ಷಮಿಸಿಬಿಡು. ಶ್ರೀಮಠದ ಮಕ್ಕಳೇ ನನ್ನನ್ನು ಕ್ಷಮಿಸಿ. ನನ್ನ ಪಯಣ ಬಸವ ಮಡಿವಾಳೇಶ್ವರನೆಡೆಗೆ. ಜೈ ಬಸವೇಶ, ಜೈ ಮಡಿವಾಳೇಶ. ಶರಣು ಶರಣಾರ್ಥಿ. ಜಗದ್ಗುರು ಶ್ರೀ ಮಡಿವಾಳೇಶ್ವರ ಶಿವಯೋಗಿಗಳ ಮಠ. ಬಸವ ಸಿದ್ಧಲಿಂಗ ಸ್ವಾಮಿಗಳು’ ಎಂದು ಬರೆಯಲಾಗಿದ್ದು, ಕೊನೆಗೆ ಮೂರು ಗೆರೆ ಎಳೆಯಲಾಗಿದೆ.

ಬಸವಸಿದ್ಧಲಿಂಗ ಸ್ವಾಮೀಜಿ ಅವರ ಬಾಲ್ಯದ ಶಿಕ್ಷಣ ಹಾಗೂ ಅಧ್ಯಾತ್ಮ ಬೋಧನೆ ಚಿತ್ರದುರ್ಗದ ಮುರುಘಾ ಮಠದಲ್ಲೇ ಆಗಿದೆ. 1972ರಲ್ಲಿ ಜನಿಸಿದ ಅವರು 2007ರಲ್ಲಿ ಮಡಿವಾಳೇಶ್ವರ ಮಠದ ಪೀಠ ಅಲಂಕರಿಸಿದ್ದರು.

Share Post