CrimeDistricts

ಶಾಸಕನ ಕಾರು ಅಡ್ಡಗಟ್ಟಿ ತಲ್ವಾರ್‌ ಝಳಪಿಸಿದ ದುಷ್ಕರ್ಮಿ

ಮಂಗಳೂರು; ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಹಾಕಿದ ದುಷ್ಕರ್ಮಿಯನ್ನು ತಲ್ವಾರ್‌ ಝಳಪಿಸಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ಈ ಘಟನೆ ನಡೆದಿದೆ.

ಶಾಸಕ ಹರೀಶ್‌ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಆಗಮಿಸಿದ್ದರು. ಈ ವೇಳೆ ಫರಂಗಿ ಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿ, ಲಾಂಗ್‌ ತೋರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಕಳೆದ ರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿನ್ನೆ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಶಾಸಕ ಹರೀಶ್‌ ಪೂಂಜಾ ಸರ್ಕ್ಯೂಟ್‌ ಹೌಸ್‌ಗೆ ಭೇಟಿ ನೀಡಿದ್ದರು. ತಡರಾತ್ರಿ ಅವರು ಅಲ್ಲಿಂದ ತಮ್ಮ ಸಂಬಂಧಿಕರಾದ ಪ್ರಶಾಂತ್‌ ಮತ್ತು ಕುಶಿತ್ ಅವರ ಕಾರಿನಲ್ಲಿ ಬೆಳ್ತಂಗಡಿಗೆ ಹೋಗುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.

 

Share Post