CrimeDistricts

20 ಅಡಿ ಹಳ್ಳಕ್ಕೆ ಬಿತ್ತು ಕಾರು; ಮಹದೇಶ್ವರನೇ ಕಾಪಾಡಿದನಾ..?

ಚಾಮರಾಜನಗರ; ಮಲೆ ಮಹದೇಶ್ವರನ ದರ್ಶನಕ್ಕೆ ತೆರಳುತ್ತಿದ್ದವರ ಕಾರು 20 ಅಡಿ ಹಳ್ಳಕ್ಕೆ ಬಿದ್ದಿದ್ದು, ಪವಾಡಸದೃಶ ರೀತಿಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಅತ್ತಿಬೆಲೆಯಿಂದ ಐದು ಮಂದಿ ಬಾಡಿಗೆ ಕಾರು ಪಡೆದು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಇಂದು ಬೆಳಗಿನಜಾವ ಮೂರು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಹನೂರು ಪಟ್ಟಣದ ಸ್ವಾಮಿ ಹಳ್ಳಕ್ಕೆ ಬಿದ್ದಿದೆ. 

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಹನೂರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಹಳ್ಳದಲ್ಲಿ ಸಿಲುಕಿದ್ದ ಕಾರನ್ನು ಮೇಲೆತ್ತಲಾಗುತ್ತಿದೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Share Post