DistrictsPolitics

ಮಂಡ್ಯದಲ್ಲಿ ಭಾರತ್‌ ಜೋಡೋ; ಪಾದಯಾತ್ರೆಯಲ್ಲಿ ಸೋನಿಯಾ

ಮಂಡ್ಯ; ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಪುನಾರಂಭವಾಗಿದೆ.  ಮಂಡ್ಯ ಜಿಲ್ಲೆ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ. ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು.  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

 ಬೆಳಗ್ಗೆ 11 ಗಂಟೆವರೆಗೆ ಪಾದಯಾತ್ರೆ ಮಾಡಿ ಬಳಿಕ ಖಾರಾದ್ಯ ಕೆರೆ ಬಳಿ ವಿಶ್ರಾಂತಿ ಪಡೆಯಲಾಗುತ್ತಿದೆ. ಸಂಜೆ 4 ಗಂಟೆಗೆ ಖಾರಾದ್ಯ ಕೆರೆಯಿಂದ ಆರಂಭವಾಗುವ ಪಾದಯಾತ್ರೆ ಸಂಜೆ 7 ಗಂಟೆಗೆ ಮಂಡ್ಯದ ಬ್ರಹ್ಮದೇವರ ಹಳ್ಳಿ ಗ್ರಾಮ ತಲುಪಲಿದೆ. ಅಕ್ಟೋಬರ್​ 3ರಂದು ಮೈಸೂರಿಗೆ ಬಂದಿರುವ ಸೋನಿಯಾ ಗಾಂಧಿ ಅವರು ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ನಾಳೆ ನಾಗಮಂಗಲದಲ್ಲಿ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸುವ ಸಾಧ್ಯತೆ ಇದೆ.
Share Post