DistrictsPolitics

ಡಿಕೆಶಿಗೆ ಬಿಗ್‌ ರಿಲೀಫ್‌; ಡಿ.ಕೆ.ಶಿವಕುಮಾರ್‌ ನಾಮಪತ್ರ ಅಂಗೀಕಾರ

ರಾಮನಗರ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಕನಕಪುರ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ತಿರಸ್ಕೃತವಾಗುತ್ತದೆಂಬ ಭೀತಿಯಿಂದ ಪಾರಾಗಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಏನಾದರೂ ಷಡ್ಯಂತ್ರ ನಾಮಪತ್ರ ತಿರಸ್ಕಾರ ಮಾಡಬಹುದು ಎಂದು ಡಿ.ಕೆ.ಶಿವಕುಮಾರ್‌ ಶಂಕಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಅವರ ಸಹೋದರ ಡಿ.ಕೆ.ಸುರೇಶ್‌ ಅವರಿಂದಲೂ ನಾಮಪತ್ರ ಸಲ್ಲಿಕೆ ಮಾಡಲಾಗಿತ್ತು. ಆದ್ರೆ ಡಿ.ಕೆ.ಶಿವಕುಮಾರ್‌ ಅವರ ನಾಮಪತ್ರ ಸಮರ್ಪಕವಾಗಿದೆ ಎಂದು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಅವರ ನಾಮಪತ್ರವನ್ನು ಅಂಗೀಕಾರ ಮಾಡಿದ್ದಾರೆ.

ಏಪ್ರಿಲ್‌ 17ರಂದು ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದ್ರೆ, ನಿನ್ನೆ ಅವರಿಗೆ ನಾಮಪತ್ರ ತಿರಸ್ಕೃತವಾಗಬಹುದೆಂಬ ಭೀತಿ ಕಾಡಿತ್ತು. ಹೀಗಾಗಿ ಡಿ.ಕೆ.ಸುರೇಶ್‌ರಿಂದ ಮಂಜಾಗ್ರತಾ ಕ್ರಮವಾಗಿ ನಾಮಪತ್ರ ಹಾಕಿಸಲಾಗಿತ್ತು. ಆದ್ರೆ ಇದೀಗ ಡಿ.ಕೆ.ಶಿವಕುಮಾರ್‌ ಸ್ಪರ್ಧೆಯಲ್ಲಿ ಉಳಿದುಕೊಳ್ಳಲಿದ್ದಾರೆ.

Share Post