CrimeDistricts

ರಸ್ತೆಯಲ್ಲಿ ಬಿದ್ದವನ ಮೇಲೆ ಹರಿದ ಬಸ್‌; ಚಿಕ್ಕಬಳ್ಳಾಪುರದಲ್ಲಿ ದಾರುಣ

ಚಿಕ್ಕಬಳ್ಳಾಪುರ; ಬೈಕ್ ಸ್ಕೀಡ್ ಆಗಿ ಕೆಳಗೆ ಬಿದ್ದ ಬೈಕ್  ಸವಾರನ ಮೇಲೆ ಬಸ್‌ ಹರಿದಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಗ್ರಾಮದ ಮುರುಳಿ(35) ಮೃತ ವ್ಯಕ್ತಿ. ಮುರುಳಿ ದೇವನಹಳ್ಳಿ ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ಆಕ್ಟೀವಾ ಹೊಂಡಾದಲ್ಲಿ ಬರುತ್ತಿದ್ದ. ಗಿರಿಯಾಸ್ ಶೋ ರೂಂ ಮುಂಭಾಗದಲ್ಲಿ ಏಕಾಏಕಿ ಬ್ರೇಕ್ ಹಾಕಿದ್ದು, ಗಾಡಿ ಸ್ಕಿಡ್ ಆಗಿ ಬಿದ್ದಿದೆ,=.

ಈ ವೇಳೆ ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಹೋಗುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್‍ನ ಹಿಂಬದಿ ಚಕ್ರಕ್ಕೆ ಮರುಳಿ ತಲೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದರೆ ಬಸ್‍ನ ಚಕ್ರ ಮುರುಳಿಗೆ ಟಚ್ ಆಗಿರುವುದು ಚಾಲಕನಿಗೂ ಗೊತ್ತಾಗದೇ ಆತ ತನ್ನ ಪಾಡಾಗಿ ಹೊರಟು ಹೋಗಿದ್ದಾನೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

Share Post