CrimeDistricts

ಸಚಿವರ ಎದುರೇ ಬಿಜೆಪಿ ಕಾರ್ಯಕರ್ತರ ಡಿಶುಂ ಡಿಶುಂ

ಹಾಸನ: ಪರಿಷತ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಸಚಿವ ಕೆ.ಗೋಪಾಲಯ್ಯ ಎದುರೇ ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ.

ಅರಸೀಕೆರೆಯಲ್ಲಿ ಬಿಜೆಪಿಯಿಂದ ಪರಿಷತ್‌ ಚುನಾವಣಾ ಪ್ರಚಾರ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಸಚಿವ ಕೆ.ಗೋಪಾಲಯ್ಯ ಪಾಲ್ಗೊಂಡಿದ್ದರು. ಗೋಪಾಲಯ್ಯ ಭಾಷಣ ಮಾಡುತ್ತಿರುವ ವೇಳೆ ಬಿಜೆಪಿಯ ಎರಡು ಗುಂಪುಗಳು ಬಡಿದಾಡಿಕೊಂಡಿವೆ.

ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post