DistrictsPolitics

ಜೆಡಿಎಸ್‌, ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ:ಸಿದ್ದರಾಮಯ್ಯ

ಬಾಗಲಕೋಟೆ: ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮತ್ತೆ ಹೇಳಿದ್ದಾರೆ. ನಿನ್ನೆ ಕೂಡ ಈ ಮಾತನ್ನು ಹೇಳಿದ್ರು. ಪುನಃ ಇವತ್ತು ಕೂಡ ಇದನ್ನು ಪುನರುಚ್ಚರಿಸಿದ್ದಾರೆ. ವಲಸಿಗರು ಕಾಂಗ್ರೆಸ್‌ಗೆ ಮತ್ತೆ ವಾಪಸ್‌ ಆಗ್ತಾರಾ ಎಂಬ ಪ್ರಶ್ನೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ನಮ್ಮ ಪಕ್ಷದ ಮೇಲೆ ನಂಬಿಕೆ ಇಟ್ಟು ಯಾರೇ ಬಂದ್ರೂ ಸವರಿಗೆ ಸ್ವಾಗತ ಇದೆ. ಬರುವ ಹಾಗಿದ್ರೆ ಕಂಡೀಷನ್‌ ಹಾಕದೆ ನಮ್ಮ ಪಕ್ಷಕ್ಕೆ ಬಂದ್ರೆ ಸ್ವಾಗತವಿದೆ. ಬಂದ ಮೇಲೆ ಪಕ್ಷದ ಸಿದ್ದಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಇದರ ಜೊತೆಗೆ ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ಮತ್ತೆ ಕಾಂಗ್ರೆಸ್‌ಗೆ ಬರ್ತಾರೆ ಎಂಬ ಹೊಸ ಬಾಂಬ್‌ ಸಿಡಿಸಿದ್ದಾರೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನನ್ನ ಸಂಪರ್ಕದಲ್ಲಿರುವವರ ಮಾಃಇತಿಯನ್ನು ನಾನು ಬಹಿರಂಗಪಡಿಸುವುದಿಲ್ಲ ಎಂದು ಬಾಗಲಕೋಟೆಯ ಬದಾಮಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share Post