DistrictsPolitics

ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

ಚಾಮರಾಜನಗರ; ಬಿಜೆಪಿ ಪಕ್ಷ ರಾಜ್ಯದ ಮೂರು ಕಡೆಯಿಂದ ವಿಜಯ ಸಂಕಲ್ಪ ಯಾತ್ರೆಗೆ ಮುಂದಾಗಿದೆ. ಇಂದು ಮೊದಲ ಯಾತ್ರೆಗೆ ಚಾಲನೆ ನೀಡಲಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ.

ಕಾಂಗ್ರೆಸ್‌ ಪ್ರಜಾಧ್ವಮಿ ಯಾತ್ರೆ ಮಾಡುತ್ತಿದ್ದು, ಜೆಡಿಎಸ್‌ ಪಂಚರತ್ನ ಯಾತ್ರೆ ಮಾಡುತ್ತಿದೆ. ಇದೀಗ ಬಿಜೆಪಿ ವಿಜ ಸಂಕಲ್ಪ ರಥ ಯಾತ್ರೆ ಶುರು ಮಾಡಿದೆ. ಜೆ.ಪಿ.ನಡ್ಡಾ ಚಾಲನೆ ನೀಡಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಸಚಿವರುಗಳು, ಸಂಸದರು ಸಾಥ್ ನೀಡಿದ್ದಾರೆ.

ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಬಳಿಕ, ಸೋಲಿಗರು ಹಾಗೂ ಬೇಡಗಂಪಣ ಜನಾಂಗದವರೊಂದಿವೆ ಸಂವಾದ ನಡೆಸಿದರು. ಹನೂರಿನಲ್ಲಿ ಬಹಿರಂಗ ಸಮಾವೇಶ ಹಾಗೂ ಕೊಳ್ಳೇಗಾಲದಲ್ಲಿ ರೋಡ್‌ ಶೋ ಕೂಡಾ ನಡೆಸಲಿದ್ದಾರೆ.

Share Post