Districts

ಗುಡಿ-ಗೋಪುರ ಮೊರೆಹೋದ ಈಶ್ವರಪ್ಪ; ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಗೋಕರ್ಣ: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡ ಕೆ.ಎಸ್‌.ಈಶ್ವರಪ್ಪ ಅವರು ಗುಡಿ-ಗೋಪುರಗಳ ಮೊರೆ ಹೋಗಿದ್ದಾರೆ. ಇಂದು ಅವರು ಗೋಕರ್ಣಕ್ಕೆ ಭೇಟಿ ನೀಡಿ, ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಇದಕ್ಕೂ ಮೊದಲು ಈಶ್ವರಪ್ಪ ಅವರು ಅಂಗಾರಕ ಸಂಕಷ್ಟಿ ಹಿನ್ನೆಲೆಯಲ್ಲಿ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ನೆರವೇರಿಸಿದ ನಂತರ ಮಾತನಾಡಿದ ಈಶ್ವರಪ್ಪ ಅವರು, ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಇಲ್ಲಿಗೆ ಬಂದಿದ್ದೇನೆ. ದೇವರಿಗೆ ಪೂಜೆಯಿಂದ ಮನಸ್ಸಿನ ನಿರಾಳತೆ ಬಯಸಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ಮಾತನಾಡುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ, ಬಿ.ಜೆ.ಪಿ.ಪ್ರಮುಖರಾದ ಪ್ರಮೋದ ಹೆಗಡೆ, ಗೋಕರ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು, ತೊರ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ಕವರಿ ಮುಂತಾದವರು ಇದ್ದರು.

Share Post