Districts

ಬಿಜೆಪಿಯವರು ಅವರ ಮನೆಗೆ ಅವರೇ ಬೆಂಕಿ ಇಡುತ್ತಿದ್ದಾರೆ; ಹೆಚ್‌.ಡಿ.ಕುಮಾರಸ್ವಾಮಿ

ರಾಮನಗರ: ರಾಜ್ಯ ಬಿಜೆಪಿ ನಾಯಕರು ತಮ್ಮ ಮನೆಗೆ ತಾವೇ ಬೆಂಕಿ ಇಟ್ಟುಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಸಚಿವ ಅಶ್ವತ್ಥನಾರಾಯಣ ಹೆಸರನ್ನು ತರಲಾಗುತ್ತಿದೆ. ಅಶ್ವತ್ಥನಾರಾಯಣ ಹೆಸರನ್ನು ತೇಲಿಬಿಟ್ಟವರು ಬೇರೆ ಯಾರೂ ಅಲ್ಲ, ಅವರ ಸಂಪುಟ ಸಹೋದ್ಯೋಗಿಗಳೇ ಎಂದು ಹೇಳಿದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ವೇಳೆ ಅಶ್ವತ್ಥನಾರಾಯಣ ಅವರ ಹೆಸರನ್ನು ಬೇಕಂತಲೇ ಎಳೆ ತರಲಾಯಿತು. ಈ ಮೂಲಕ ಅಶ್ವತ್ಥನಾರಾಯಣ ಅವರ ತಲೆದಂಡಕ್ಕೆ ಒತ್ತಡ ಹೇರುವುದಕ್ಕೆ ಬಿಜೆಪಿಯ ಕೆಲ ನಾಯಕರು ತೀರ್ಮಾನಿಸಿದ್ದರು. ಹೀಗಾಗಿ ಮಾಧ್ಯಮಗಳಿಗೆ ಅವರೇ ಮಾಹಿತಿ ನೀಡಿದ್ದಾರೆ ಎಂದು ದೂರಿದರು. ಇನ್ನು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಕಾಂಗ್ರೆಸ್ ನವರು ದಾಖಲೆ ಮುಂದಿಡದೇ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.‌

Share Post