Districts

ಬಿಜೆಪಿ ಶಾಸಕನ ಕಚೇರಿ ಮೇಲೆ ಬೆಳಗಿನ ಜಾವ ಕಲ್ಲು ತೂರಾಟ

ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್‌ ಬೆನಕೆ ಅವರ ಕಚೇರಿ ಮೇಲೆ ದುಷ್ಕರ್ಮಿಗಳು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿದ್ದಾರೆ. ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ದಾಳಿನಡೆಸಿರುವ ದುಷ್ಕರ್ಮಿಗಳು ಕಲ್ಲು ತೂರಿ, ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ.

ಬೆಳಗಾವಿ ನಗರದ ಚವಾಟ ಗಲ್ಲಿಯಲ್ಲಿ ಶಾಸಕರ ಕಚೇರಿ ಇದೆ. ಇಲ್ಲಿ ಈ ದುರ್ಘಟನೆ ನಡೆದಿದೆ. ಕುಡಿದ ವ್ಯಕ್ತಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿದೆ. ಯಾಕೆ ಹೀಗೆ ಕಲ್ಲು ತೂರಿದರು ಎಂಬ ಪ್ರಶ್ನೆ ಎದ್ದಿದೆ.

ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಪಾನಮತ್ತ ವ್ಯಕ್ತಿ ಈ ರೀತಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಆದತನಿಗೆ ಯಾರಾದರೂ ಪ್ರಚೋದನೆ ನೀಡಿದರಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Share Post