CrimeDistricts

ಭೀಮಾ ತೀರದಲ್ಲಿ ಮತ್ತೆ ಹರಿಯಿತು ರಕ್ತ; ಗ್ರಾಪಂ ಅಧ್ಯಕ್ಷನ ಬರ್ಬರ ಹತ್ಯೆ

ಕಲಬುರಗಿ; ಭೀಮಾ ತೀರದಲ್ಲಿ ಮತ್ತೆ ರಕ್ತ ಹರಿಸಲಾಗಿದೆ. ಗ್ರಾಮ ಪಂಚಾಯತ್‌ ಅಧ್ಯಕ್ಷರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚೌಡಾಪೂರದಲ್ಲಿ ಮದರಾ(ಬಿ) ಗ್ರಾಪಂ ಅಧ್ಯಕ್ಷ ಗೌಡಪ್ಪ ಗೌಡ ಪಾಟೀಲ್‌ ಅವರನ್ನು ಕೊಲೆ ಮಾಡಲಾಗಿದೆ.

ಈ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ದೇವಲ ಗಾಣಗಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share Post