CrimeDistricts

ರಾಜಹಂಸ-ಕಾರು ಡಿಕ್ಕಿ; ಓರ್ವ ಸಾವು, ಐವರು ಗಂಭೀರ..!

ವಿಜಯಪುರ; ಬೊಲೆರೊ ಕಾರು ಹಾಗೂ ರಾಜಹಂಸ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಬ್ಬ ಸಾವನಪ್ಪಿದ್ದಾನೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆ ಸೇರಿದ್ದಾರೆ. ಕೊಲ್ಹಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಕೃಷ್ಣಾ ನದಿ ಸೇತುವೆ ಮೇಲೆ ಈ ಘಟನೆ ನಡೆದಿದೆ.

ಒಡಿಸ್ಸಾ ರಾಜ್ಯದ ಸುಂದರಘರ್ ಜಿಲ್ಲೆಯ ಸಂದೀಪ್ ಶರ್ಮಾ ನಾಯಕ್ (30) ಮೃತ ವ್ಯಕ್ತಿಯಾಗಿದ್ದು. ಕಾರಿನಲಿದ್ದವರೆಲ್ಲರೂ ಒಡಿಸ್ಸಾ ಮೂಲದವರು ಎಂದು ಗೊತ್ತಾಗಿದೆ. ಹುಬ್ಬಳ್ಳಿಯಿಂದ ವಿಜಯಪುರದತ್ತ ಹೋಗುತ್ತಿದ್ದ ಕಾರಿನ ಚಾಲಕ ನಿದ್ದೆ ಮಂಪರಿನಲ್ಲಿ ಎದುರಿಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ರಾಜಹಂಸ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಗೊತ್ತಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ 108 ಅಂಬುಲೆನ್ಸ್ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಗಾಯಗೊಂಡ ಐವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದರು.

Share Post