DistrictsPolitics

ಬೊಮ್ಮಾಯಿ-ಶಾಮನೂರು ಗುಪ್ತ ಮಾತು; 25 ನಿಮಿಷಗಳ ಮಾತುಕತೆ ಏನು..?

ದಾವಣಗೆರೆ; ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಆರೋಪ ಕೇಳಿಬರುತ್ತಿದೆ. ಸಂಸದ ಪ್ರತಾಪ ಸಿಂಹ ನಿನ್ನೆ ಮೈಸೂರಿನಲ್ಲಿ ಸ್ವಪಕ್ಷೀಯರ ವಿರುದ್ಧವೇ ಇಂತಹ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿ ಗುಪ್ತ ಮಾತುಕತೆ ನಡೆಸಿದ್ದಾರೆ. ಇದು ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ನಿನ್ನೆ ದಾವಣಗೆರೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರೆಸಾರ್ಟ್‌ನಲ್ಲಿ ಇಬ್ಬರೇ ಬಾಗಿಲು ಹಾಕಿಕೊಂಡು ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ. ಒಳಗೆ ಯಾರನ್ನೂ ಬಿಟ್ಟಿಲ್ಲ. ಸುಮಾರು 25 ನಿಮಿಷಗಳ ಕಾಲ ಇಬ್ಬರೂ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ ಯಾವ ವಿಚಾರದ ಬಗ್ಗೆ ಮಾತುಕತೆಯಾಗಿದೆ ಅನ್ನೋದು ಗೊತ್ತಾಗುತ್ತಿಲ್ಲ.

Share Post