CrimeDistricts

ಇದ್ದಕ್ಕಿದ್ದಂತೆ ಕುಸಿದ ಬೆಣ್ಣೆಹಳ್ಳ ಬ್ರಿಡ್ಜ್‌; ಕೂದಲೆಳೆ ಅಂತರದಲ್ಲಿ ಯುವಕರು ಪಾರು

ಹುಬ್ಬಳ್ಳಿ; ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಹುಬ್ಬಳ್ಳಿ ಸುತ್ತಮುತ್ತಲೂ ಭಾರಿ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿ ಧಾರಾಕಾರ ಸುರಿದ ಪರಿಣಾಮ‌ ಬೆಣ್ಣೆ ಹಳ್ಳ ಉಕ್ಕಿ ಹರಿದಿದೆ. ಬೆಣ್ಣೆಹಳ್ಳ ಪ್ರವಾಹ ವೀಕ್ಷಿಸಲು ಯುವಕರು ತೆರಳಿದ್ದು, ಪ್ರವಾಹದ ರಭಸಕ್ಕೆ ಕನ್ನೂರು ಬ್ರಿಡ್ಜ್​ ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಯುವಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ನವಲಗುಂದ ತಾಲೂಕಿನ ಕನ್ನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಯುವಕರು ಬ್ರಿಡ್ಜ್ ಮೇಲೆ ಸಿಲುಕಿ ಕೆಲ ಕಾಲ ಒದ್ದಾಡಿದ್ದಾರೆ. ಕೂಡಲೇ ಸ್ಥಳೀಯರು ಯುವಕರನ್ನು ರಕ್ಷಿಸಿದ್ದಾರೆ. ಬ್ರಿಡ್ಜ್‌ ಕುಸಿದಿದ್ದರಿಂದ  ನವಲಗುಂದ-ಹೈದರಾಬಾದ್​ ಹೆದ್ದಾರಿ ಸಂಪೂರ್ಣ ಸ್ಥಗಿತಗೊಂಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಸಂಪೂರ್ಣ ಜಲಾವೃತಗೊಂಡು ಜನರು ಕಂಗಾಲಾಗಿದ್ದರು. ಬೆಣ್ಣೆ ಹಳ್ಳದ ದಡದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

Share Post