CrimeDistricts

RTPS ನಲ್ಲಿ ಕಳಚಿದ 3 ಬಂಕರ್‌ಗಳು; ಕೋಟ್ಯಂತರ ರೂಪಾಯಿ ನಷ್ಟ

ರಾಯಚೂರು; ಬಿಸಿಲುನಾಡು ರಾಯಚೂರಿನ ಶಕ್ತಿ ನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್‌ ಕೇಂದ್ರದಲ್ಲಿ ಭಾರಿ ಅವಘಡ ಸಂಭವಿಸಿದೆ. ಇಲ್ಲಿನ ಒಂದೇ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹಗೊಂಡಿದ್ದ ಮೂರು ಬಂಕರ್‌ಗಳು ಕಳಚಿ ಬಿದ್ದಿದ್ದು, ಕೋಟ್ಯಂತರ ರೂಪಾಯಿ ಹಾನಿ ಸಂಭವಿಸಿದೆ. ಜೊತೆಗೆ ವಿದ್ಯುತ್‌ ಉತ್ಪಾದನೆ ಕೂಡಾ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. 

ಹಲವಾರು ದಿನಗಳಿಂದ ಕಲ್ಲಿದ್ದಲು ಸಾಗಿಸದೆ ಸಂಗ್ರಹಿಸಿಟ್ಟ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕಲ್ಲಿದ್ದಲು ಭಾರ ಹೆಚ್ಚಾಗಿದ್ದರಿಂದ ಬಂಕರ್‌ಗಳು ಕಳಚಿ ಬಿದ್ದಿವೆ. ಬಾಯ್ಲರ್ ಬಳಿ ಘಟನೆ ನಡೆದಿದ್ದು, ನೀರಿನ ಮಾರ್ಗ ಹಾಳಾಗಿ ನೀರು ಪೋಲಾಗಿದೆ. ಬಂಕರ್‌ಗಳಿಂದ ಮಿಲ್ ಮೂಲಕ ರವಾನಿಸಬೇಕಿದ್ದ ಕಲ್ಲಿದ್ದಲು ಲೋಡ್ ಹೆಚ್ಚಾಗಿ ಕುಸಿತವಾಗಿದೆ.

Share Post