Districts

ಬಸ್‌ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಸ್​ ಬಿದ್ದ ದುರ್ಘಟನೆ ತಾಲೂಕಿನ ಎಲೆಬೇತೂರು ಗ್ರಾಮದ ಬಳಿ ನಡೆದಿದೆ. ಎದುರಿಗೆ ಬಂದ ಬೈಕ್​ಗೆ ದಾರಿ ಬಿಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ.
ಎದುರಿಗೆ ಬಂದ ಬೈಕ್​ಗೆ ದಾರಿ ಬಿಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ. ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯ ಆಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅದೃಷ್ಟವಾಷತ್‌ ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share Post