Districts

ತಾಂತ್ರಿಕ ದೋಷದಿಂದ ಆಕಸ್ಮಿಕ ಬೆಂಕಿ; ಖಾಸಗಿ ಸಂಪೂರ್ಣ ಭಸ್ಮ

ಕಾರವಾರ : ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಒಂದಕ್ಕೆ ಬೆಂಕಿ ತಗುಲಿದ ಕಾರಣ ಬಸ್‌ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಬಸ್ಸಿನಲ್ಲಿ ೨೨ ಜನರು ಪ್ರಯಾಣ ಮಾಡುತ್ತಿದ್ದರು, ಅದೃಷ್ಟವಶಾತ್‌ ಯಾರಿಗೂ ಅಪಾಯ ಸಂಭವಿಸಿಲ್ಲ.

ತಾಂತ್ರಿಕ ದೋಷದಿಂದ ಬಸ್ಸಿಗೆ ಬೆಂಕಿ ತಗುಲಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಪ್ರಕರಣವನ್ನು ಯಲ್ಲಾಪುರ ಪೊಲೀಸ್‌ ದಾಖಲಿಸಿಕೊಂಡಿದ್ದಾರೆ.

Share Post