Districts

ಪೆಟ್ರೋಲ್‌ ಬಂಕ್‌ ಬಳಿ ಪಾರ್ಕಿಂಗ್‌; ಸುಟ್ಟು ಕರಕಲಾದ ಖಾಸಗಿ ಬಸ್

ಚಿಕ್ಕಮಗಳೂರು: ‌ಪೆಟ್ರೋಲ್‌ ಬಂಕ್‌ ಬಳಿ ಪಾರ್ಕಿಂಗ್‌ ಮಾಡಲಾಗಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ.

ಕಳೆದ ರಾತ್ರಿ ಕೊಟ್ಟಿಗೆಹಾರದಲ್ಲಿರುವ ಪೆಟ್ರೋಲ್‌ ಬಂಕ್‌ ಬಳಿ ಖಾಸಗಿ ಬಸ್‌ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಇದ್ದಕ್ಕಿದ್ದಂತೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಂಕ್‌ ನಲ್ಲಿ ಮಲಗಿದ್ದ ಸಿಬ್ಬಂದಿಗೆ ಈ ವಿಷಯ ಗೊತ್ತಾಗಿದ್ದು, ಕೂಡಲೇ ಅಕ್ಕಪಕ್ಕದವರ ಸಹಾಯದಿಂದ ಬೆಂಕಿ ನಂದಿಸಿದ್ದಾರೆ.

ಪೆಟ್ರೋಲ್‌ ಬಂಕ್‌ನಲ್ಲಿ ಡೀಸೆಲ್‌ ಹಾಗೂ ಪೆಟ್ರೋಲ್‌ ಇತ್ತು. ಹೀಗಾಗಿ ಬೆಂಕಿ ದೊಡ್ಡಗಾಗಿ ವ್ಯಾಪಿಸಿದ್ದಿದ್ದರೆ, ದೊಡ್ಡ ಸ್ಫೋಟವಾಗುತ್ತಿತ್ತು. ಇದರಿಂದ ದೊಡ್ಡ ದುರಂತವೇ ನಡೆಯುವ ಅಪಾಯವಿತ್ತು. ಆದರೆ ಬಂಕ್‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

 

Share Post