CrimeDistricts

ರಸ್ತೆಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಬಸ್‌; ವಿದ್ಯಾರ್ಥಿನಿ ಸಾವು..!

ಚಿಕ್ಕಮಗಳೂರು; ಬಸ್‌ ಗಾಗಿ ಕಾಯುತ್ತಿದ್ದ ಶಾಲಾ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಸೀತಾಪುರ ಕಾವಲ್‌ ದುಗ್ಲಾಪುರ ಗೇಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಬಸ್‌ ಡಿಕ್ಕಿ ಹೊಡೆದಿದ್ದರಿಂದ 15 ವರ್ಷ ವರ್ಷದ ತುಳಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನು 14 ವರ್ಷದ ನಿವೇದಿತ ಎಂಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಒಬ್ಬ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಓವರ್‌ ಸ್ಪೀಡ್‌ನಲ್ಲಿ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿದ್ದ ಮನೆಯ ಮುಂಭಾಗದ ಛಾವಣಿ ಸಂಪೂರ್ಣವಾಗಿ ಜಖಂಗೊಂಡಿದೆ. ಸ್ಥಳದಲ್ಲಿದ್ದ ಐವರು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇನ್ನು ಇದೇ ವೇಳೆ ಗ್ರಾಮಸ್ಥರು ಬಸ್‌ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್‌ನ ಕಿಟಕಿ ಗಾಜು ಪುಡಿಪುಡಿ ಮಾಡಿದ್ದಾರೆ.

 

Share Post