BengaluruDistricts

ಎಂಇಎಸ್‌ ಪುಂಡಾಟ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ

ಚಿಕ್ಕಮಗಳೂರು: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರು ತಡರಾತ್ರಿ ನಡೆಸಿರುವ ಕುಲ್ಲು ತೂರಾಟ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆಲವರು ಅರಾಜಕತೆ, ಸಂಘರ್ಷ ನಡೆಸಲು ಸಂಚು ರೂಪಿಸಿದ್ದಾರೆ. ಕಳೆದ ಬಾರಿ ಮಹಾರಾಷ್ರ್ಟದ ಕೊಲ್ಹಾಪುರದಲ್ಲಿ ಕನ್ನಡದ ಬಾವುಟ ಸುಟ್ಟಿದ್ದರು. ಈಗ ಶಿವಾಜಿ ಪ್ರತಿಮೆಗೆ ಮಸಿ ಬಳಿಯುವ ಕೃತ್ಯ ನಡೆಸಿದ್ದಾರೆ. ಇದು ಮಹಾರಾಷ್ಟ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಾಲುದಾರಿಕೆ ಇದೆ. ಹೀಗಾಗಿ ಶಿವಾಜಿ ಪ್ರತಿಮೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಕರ್ನಾಟಕ- ಮಹಾರಾಷ್ಟ್ರ ನಡುವೆ ಸಂಘರ್ಷ ನಡೆಯಲು ಸಂಚು ನಡೆಸುತ್ತಿದ್ದಾರೆ. ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರಲು ಕೆಲವರಿಂದ ಷಡ್ಯಂತರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share Post