DistrictsPolitics

ಕೊಡಗು ಚಲೋ ರದ್ದು; ಕಾಂಗ್ರೆಸ್‌ ನಿರ್ಧಾರ ಸ್ವಾಗತಿಸುತ್ತೇನೆ ಎಂದ ಬಿಎಸ್‌ವೈ

ಮೈಸೂರು; ಕೊಡಗು ಚಲೋ ಕಾರ್ಯಕ್ರಮ ರದ್ದು ಮಾಡಿರುವ ಕಾಂಗ್ರೆಸ್‌ ನಾಯಕರ ನಿರ್ಧಾರ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೊಡಗು ಚಲೋ ಕಾರ್ಯಕ್ರಮವನ್ನು ಕಾಂಗ್ರೆಸ್‌ ರದ್ದುಪಡಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ನಿರ್ಧಾರ ಸ್ವಾಗತಿಸುತ್ತೇನೆ ಎಂದರು.

ಶಾಂತ ವಾತಾರಣ ಇದ್ದಾಗ ಎಷ್ಟು ಜನರನ್ನು ಬೇಕಾದರೂ ಸೇರಿಸಬಹುದು. ಆದ್ರೆ ವಾತಾವರಣ ಹದಗೆಟ್ಟಿರುವಾಗ ಜನರನ್ನು ಸೇರಿಸುವುದು ಸರಿಯಲ್ಲ. ಹೀಗಾಗಿ, ಕಾರ್ಯಕ್ರಮ ರದ್ದುಪಡಿಸಿರುವುದಕ್ಕೆ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುತ್ತೇನೆ. ಹಾಗೆಯೇ ಬಿಜೆಪಿ ಕಾರ್ಯಕರ್ತರೂ ಪ್ರತಿಭಟನೆ ನಡೆಸಬಾರದು ಎಂದು ಯಡಿಯೂರಪ್ಪ ಹೇಳಿದ್ದಾರೆ.

Share Post