CrimeDistricts

ಧಾರವಾಡ-ಬೆಳಗಾವಿ ಬೈಪಾಸ್‌ನಲ್ಲಿ ಕಾರು ಪಲ್ಟಿ; ಇಬ್ಬರ ದುರ್ಮರಣ

ಧಾರವಾಡ; ಧಾರವಾಡ-ಬೆಳಗಾವಿ ಬೈಪಾಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿವೆ. ಕೆಲ ದಿನಗಳ ಹಿಂದಷ್ಟೇ ಬೈಕ್‌ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದರು. ಇದೀಗ ಕಾರೊಂದು ಪಲ್ಟಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಧಾರವಾಡ ತಾಲ್ಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ನಡೆದಿದೆ. ಧಾರವಾಡದಿಂದ ಢಾಬಾವೊಂದಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್‌ ಹಿರೇಮಠ್‌ ಹಾಗೂ ಸಂದೀಪ್‌ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಕಾರು ಪಲ್ಟಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

Share Post