DistrictsPolitics

ಕಾವೇರಿ ವಿವಾದ; ಸುಪ್ರೀಂನಲ್ಲಿ ಚಾಲೆಂಜ್‌ ಮಾಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ; ಕಾವೇರಿ ವಿಚಾರದಲ್ಲಿ ನಾವು ಯಾವುದೇ ಕಾರಣಕ್ಕೂ ರಾಜೀ ಆಗೋದಕ್ಕೆ ಸಾಧ್ಯವಿಲ್ಲ. ಕಾವೇರಿ ನದಿ ನೀರು ಹಂಚಿಕೆ ಸಮಿತಿ ಆದೇಶವನ್ನು ನಾವು ಸುಪ್ರೀಂಕೋರ್ಟ್‌ನಲ್ಲಿ ಚಾಲೆಂಜ್‌ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಲೈಮಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ  18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಆದ್ರೆ ನಮಗೇ ನೀರಿಲ್ಲ ಎಂದು ಹೇಳಿದ್ದಾರೆ.

ಸದ್ಯ ನಮ್ಮ ಬಳಿ ನೀರಿಲ್ಲ. ಹೀಗಾಗಿ ಬಿಡುವುದಕ್ಕೆ ಆಗುವುದಿಲ್ಲ. ಈಗಾಗಲೇ ನಾವು ಕಾನೂನು ತಜ್ಞರಿಂದ ಸಲಹೆಗಳನ್ನು ಪಡೆದುಕೊಂಡಿದ್ದೇವೆ. ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ. ಸುಪ್ರೀಂಕೋರ್ಟ್‌ಗೆ ರಾಜ್ಯದ ಪರಿಸ್ಥಿತಿ ಮನವಿ ಮಾಡಿಕೊಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Share Post