DistrictsPolitics

ತಮಿಳುನಾಡಿಗೆ ಕಾವೇರಿ ನೀರು; ಪಕ್ಷಭೇದ ಮರೆತು ಹೋರಾಡೋಣ ಎಂದ ಸುಮಲತಾ

ಮಂಡ್ಯ; ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ಯಾವುದೇ ಪಕ್ಷ, ಸಂಘಟನೆ ಎಂದು ನೋಡದೇ ಎಲ್ಲರೂ ಒಂದಾಗಬೇಕು, ಹೋರಾಟ ಮಾಡಬೇಕು ಎಂದು ಕರೆ ಕೊಟ್ಟಿದ್ದಾರೆ. ಮಂಡ್ಯದಲ್ಲಿ ಈ ವಿಚಾರವಾಗಿ ಅವರು ಮಾತನಾಡಿದರು.

ನಾನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಇಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ಧೇನೆ ಎಂದು ಸುಮಲತಾ ಅವರು ಹೇಳಿದರು. ನಾಡು, ನುಡಿ, ಜಲದ ವಿಚಾರವಾಗಿ ರಾಜ್ಯ ರೈತರಿಗೆ, ಜನರಿಗೆ ಸಮಸ್ಯೆಯಾದರೆ ಎಲ್ಲರೂ ಒಂದಾಗಬೇಕು. ಕಾವೇರಿ ವಿಚಾರದಲ್ಲಿ ಪಕ್ಷಭೇದ ಮರೆತು ಎಲ್ಲರೂ ಒಂದಾಗೋಣ ಎಂದು ಹೇಳಿದರು.

 

Share Post