Districts

ದಸರಾ ವೇಳೆ ಮೈಸೂರಿನಲ್ಲಿ ಏರ್‌ಶೋಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌

ಮೈಸೂರು; ಮೈಸೂರಿನ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಏರ್‌ ಶೋ ನಡೆಸೋದಕ್ಕೆ ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಈ ಬಗ್ಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಮೈಸೂರಿನಲ್ಲಿ ದಸರಾ ವೇಳೆ ಏರ್‌ ಶೋ ನಡೆಸೋದಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ ಅವರು ಇಂದು ಬನ್ನಿಮಂಟಪ ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೇ ಮೈಸೂರು ಏರ್ ಬೇಸ್​ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಚರ್ಚೆ ನಡೆಸಿದರು. ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಸಿದ್ದರಾಮಯ್ಯ ಇತ್ತೀಚೆಗೆ ದೆಹಲಿಗೆ ಭೇಟಿ ಕೊಟ್ಟಿದ್ದಾಗ ಕೇಂದ್ರ ರಕ್ಷಣಾ ಸಚಿವರ ಬಳಿ ಅನುಮತಿ ಕೇಳಿದ್ದರು.

Share Post