CrimeDistricts

ಕೆಲಸದಿಂದ ತೆಗೆದಿದ್ದಕ್ಕೆ ಕೊಲೆ ನಡೆಯಿತಾ..?; ಗೃಹ ಸಚಿವರು ಹೇಳೋದು ಏನು..?

ಬೆಂಗಳೂರು; ಕೊಲೆಯಾದ ಚಂದ್ರಶೇಖರ್‌ ಗುರೂಜಿಯವರ ಹುಬ್ಬಳ್ಳಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಇತ್ತೀಚೆಗೆ ಕೆಲಸದಿಂದ ತೆಗೆಯಲಾಗಿತ್ತು. ಈ ಸೇಡಿನಿಂದಲೇ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಚಂದ್ರಶೇಖರ ಗುರೂಜಿಯವರು ತಮ್ಮ ಕುಟುಂಬ ಸದಸ್ಯರೊಬ್ಬರ ಕಾರ್ಯದಲ್ಲಿ ಪಾಲ್ಗೊಳ್ಳಲು ಮುಂಬೈನಿಂದ ಹುಬ್ಬಳ್ಳಿಗೆ ಬಂದಿದ್ದರು. ಭಾನುವಾರ ಹುಬ್ಬಳ್ಳಿಗೆ ಬಂದಿದ್ದ ಅವರು ನಾಲ್ಕು ದಿನಕ್ಕೆ ಹೋಟೆಲ್‌ನಲ್ಲಿ ರೂಂ ಬುಕ್‌ ಮಾಡಿದ್ದರು. ಪ್ರೆಸಿಡೆಂಟ್‌ ಹೋಟೆಲ್‌ನ ರೂಮ್‌ ನಂಬರ್‌ 220ರಲ್ಲಿ ತಂಗಿದ್ದರು.

Share Post