CrimeDistricts

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; ಚಾರ್ಜ್‌ ಶೀಟ್‌ ಸಲ್ಲಿಕೆ

ಹುಬ್ಬಳ್ಳಿ; ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸರಳ ವಾಸ್ತು ಖ್ಯಾತಿಗೆ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ಸಂಬಂಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ. ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

    ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು.5ರಂದು ಇಲ್ಲಿನ ಹುಬ್ಬಳ್ಳಿಯ ಉಣಕಲ್ಲ ಕೆರೆ ಬಳಿಯ ಹೊಟೇಲ್​ನಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ನಡೆದ 4 ಗಂಟೆಯೊಳಗೆ ಹಂತಕರನ್ನು ಬಂಧಿಸಲಾಗಿತ್ತು.

Share Post