DistrictsHealth

ಜೈನ ಮಠದ ಚಾರುಕೀರ್ತಿ ಸ್ವಾಮೀಜಿ ವಿಧಿವಶ

ಹಾಸನ; ಶ್ರವಣಬೆಳಗೊಳ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಬಿಪಿ, ಶುಗರ್‌ ಏರುಪೇರಾಗಿದ್ದು, ಇಹಲೋಕ ತ್ಯಜಿಸಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಶ್ರೀಗಳಿಗೆ ಕಳೆದ ನಾಲ್ಕೈದು ತಿಂಗಳಿನಿಂದ ಅನಾರೋಗ್ಯವಿತ್ತು. ಇತ್ತೀಚೆಗೆ ಅದು ಉಲ್ಬಣವಾಗಿತ್ತು. ಭಂಡಾರ ಭವನದಲ್ಲಿದ್ದ ಅವರಿಗೆ ಇಂದು ಬೆಳಗ್ಗೆ ಬಿಪಿ, ಶುಗರ್‌ನಲ್ಲಿ ಏರುಪೇರಾಗಿದೆ. ಇದರಿಂದ ಅಸ್ವಸ್ಥಗೊಂಡಿದ್ದ ಅವರು ಕೆಳಗೆ ಬಿದ್ದಿದ್ದಾರೆ. ಕೂಡಲೇ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಯಿತು. ನಂತರೆ ಅಂಬುಲೆನ್ಸ್‌ ಮೂಲನ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ದೈವಾದೀನರಾಗಿದ್ದಾರೆ.

ಶ್ರೀಗಳ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Share Post