DistrictsHealth

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು..!

ಬಾಗಲಕೋಟೆ; ಹಿರಿಯ ವಯಸ್ಸಿನವರಿಗೆ ಮಾತ್ರ ಮೊದಲು ಹೃದಯಾಘಾತವಾಗುತ್ತಿತ್ತು. ಆದ್ರೆ ಇತ್ತೀಚೆಗೆ ಮಕ್ಕಳಲ್ಲೂ ಹೃದಯಾಘಾತಗಳು ಹೆಚ್ಚಾಗಿವೆ. ನಮ್ಮ ಕರ್ನಾಟಕದಲ್ಲೇ ಶಾಲಾ ಮಕ್ಕಳು ಹೃದಯಾಘಾತಕ್ಕೆ ಬಲಿಯಾದ ಪ್ರಕರಣಗಳು ಇತ್ತೀಚೆಗೆ ನಡೆದಿವೆ. ಹೀಗಿರುವಾಗಲೇ ಮತ್ತೊಂದು ಪ್ರಕರಣ ಇಂತಹದ್ದೊಂದು ನಡೆದಿದೆ. ಬಾಗಲಕೋಟೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ.

ಜಮಖಂಡಿ ತಾಲ್ಲೂಕಿನ ಇನಾಮ ಹಂಚಿನಾಳ ಗ್ರಾಮದ ರಾಹುಲ್ ಕೋಲಕಾರ (15) ಬಲಿಯಾದ ವಿದ್ಯಾರ್ಥಿ. ಈತ  ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಶಂಭುಲಿಂಗೇಶ್ವರ ಶಾಲೆಯಲ್ಲಿ ರಾಹುಲ್‌ 9 ನೇ ತರಗತಿ ಓದುತ್ತಿದ್ದ. ಶುಕ್ರವಾರ ಅರ್ಧವಾರ್ಷಿಕದ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

 

Share Post