Districts

ಉಕ್ರೇನ್‌ ಯುದ್ಧ ಭೂಮಿಯಲ್ಲಿ ಮೃತಪಟ್ಟ ನವೀನ್‌ ಕುಟುಂಬಕ್ಕೆ ಸಿಎಂ ಸಾಂತ್ವನ:25ಲಕ್ಷ ಪರಿಹಾರ ವಿತರಣೆ

ಹಾವೇರಿ: ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಶೆಲ್‌ ದಾಳಿಗೆ ಬಲಿಯಾದ ಹಾವೇರಿ ಮೂಲದ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್‌ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಿಎಂ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ರು. ಇದೀಗ ನವೀನ್‌ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ 25ಲಕ್ಷ ರೂಪಾಯಿ ಚೆಕ್‌ ವಿತರಣೆ ಮಾಡಿದ್ದಾರೆ. ಈ ವೇಳೆ ನವೀನ್‌ ಫೋಟೋಗೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿಯವರು ನವೀನ್‌ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಯುದ್ಧ ನಡೆಯುತ್ತಿರುವ ಕಾರಣದಿಂದ ಮೃತದೇಹ ಸಾಗಿಸುವುದು ಕಷ್ಟವಾಗ್ತಿದೆ. ಸತತ ಪ್ರಯತ್ನ ಪಟ್ಟು ಪಾರ್ಥಿವ ಶರೀರ ಭಾರತಕ್ಕೆ ತರುವಂತೆ ಮಾಡ್ತೇವೆ ಎಂಬ ಭರವಸೆಯನ್ನು ನೀಡಿದ್ರು.

 

Share Post