Districts

ಕಾಂಗ್ರೆಸ್‌ನಲ್ಲಿ ಡಿಕೆಶಿ, ಸಿದ್ದರಾಮಯ್ಯ ಒಂದೊಂದು ತೀರದಲ್ಲಿದ್ದಾರೆ; ಸಿಎಂ ಬೊಮ್ಮಾಯಿ

ಮೈಸೂರು; ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಜೋರಾಗಿದೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ನಾನೊಂದು ತೀರ, ನೀನೊಂದು ತೀರ ಎನ್ನುತ್ತಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಕೆಲಸ ಮಾಡಲು ಅವರ ಪಕ್ಷದವರೇ ಬಿಡುತ್ತಿಲ್ಲ ಎಂದು ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. 

   ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ತಮ್ಮ ತಟ್ಟೆಯಲ್ಲೇನಿದೆ ಅನ್ನೋದನ್ನ ನೋಡುತ್ತಿಲ್ಲ. ಬದಲಾಗಿ, ನಮ್ಮ ಬಗ್ಗೆ ಮಾತನಾಡಲು ಬರುತ್ತಾರೆ ಎಂದು ಗರಂ ಆದರು.  ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಮಾತನಾಡಿದ ಅವರು, ಜುಲೈ 22ರಂದು ಸುಪ್ರೀಂಕೋರ್ಟ್​ಗೆ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಪ್ರಮಾಣಪತ್ರ ಸಲ್ಲಿಸುತ್ತೇವೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೈಸೂರು ಮೇಯರ್ ಚುನಾವಣೆಗೆ ಮೀಸಲಾತಿ ನಿಗದಿ ಮಾಡಲು ಶೀಘ್ರವೇ ಕ್ರಮವಹಿಸುತ್ತೇವೆ ಎಂದು ಹೇಳಿದ್ದಾರೆ.

Share Post