Districts

ರೈತರ ಮನೆಗೆ ಕಂದಾಯ ದಾಖಲಿಸುವ ಯೋಜನೆ; ಸಿಎಂ ಬೊಮ್ಮಾಯಿ ಚಾಲನೆ

 ಚಿಕ್ಕಬಳ್ಳಾಪುರ; ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ಯೋಜನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರಲಹಳ್ಳಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗ್ರಾಮದ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ‌ ಇಂದು ಯೋಜನೆಗೆ ಚಾಲನೆ ನೀಡಲಾಯಿತು.

ಕಂದಾಯ ಸಚಿವ ಆರ್ ಅಶೋಕ್, ಆರೋಗ್ಯ ಸಚಿವ ಡಾ.ಸುಧಾಕರ್, ಪೌರಾಡಳಿತ‌ ಸಚಿವ ಎಂಟಿಬಿ ನಾಗರಾಜ್, ಕಂದಾಯ ಇಲಾಖೆಯ ಪ್ರಧಾನ‌ಕಾರ್ಯದರ್ಶಿ ತುಷಾರ ಗಿರಿನಾಥ, ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share Post