Districts

ಹಣೆಯಲ್ಲಿ ವಿಭೂತಿ, ಕೇಸರಿ ವಸ್ತ್ರದಲ್ಲಿ ಮಿಂಚಿದ ಸಿಎಂ ಬಸವರಾಜ್‌ ಬೊಮ್ಮಾಯಿ

ದಾವಣಗೆರೆ: ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯ  ಹರಿಹರ ನಗರದಲ್ಲಿ ತುಂಗಾಭದ್ರಾ ಆರತಿ ಮಂಟಪಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ಹಣೆಯಲ್ಲಿ ವಿಭೂತಿ, ಕೇಸರಿ ವಸ್ತ್ರ ಧರಿಸಿ ಗಮನ ಸೆಳೆದರು.

ತುಂಗಾಭದ್ರಾ ನದಿಯ ತಟದಲ್ಲಿ 108 ಆರತಿ ಮಂಟಪಗಳಿಗೆ ಶಂಕು ಸ್ಥಾಪನೆಯನ್ನು ಗಂಗಾ ಪೂಜೆ ಮಾಡುವ ಮುಖ್ಯ ಮಂತ್ರಿ ಬಸವರಾಜ್  ಬೊಮ್ಮಾಯಿ ನೆರವೇರಿಸಿದರು. ಉತ್ತರ ಭಾರತದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುವ ಗಂಗಾರತಿ ಕಾರ್ಯಕ್ರಮದಂತೆ ದಕ್ಷಿಣ ಕಾಶಿ ಹರಿಹರದಲ್ಲೂ ತುಂಗಾರತಿ ಕಾರ್ಯಕ್ರಮ ನಡೆಸಲಾಗುತ್ತಿದೆ.

ಸುಮಾರು 30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವ್ಯ ಮಂಟಪ ಹಾಗೂ ಉದ್ಯಾನವನ ಇಲ್ಲಿನ ತುಂಗಾಭದ್ರ ನದಿಯ ತಟದಲ್ಲಿರುವ ರಾಘವೇಂದ್ರ ಮಠದ ಬಳಿ ನೆರವೇರಿತು. ಪಂಚಮಸಾಲಿ ಪೀಠದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ನಿರಾಣಿ, ಭೈರತಿ ಬಸವರಾಜ್, ಸಂಸದ ಸಿದ್ದೇಶ್ವರ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಕೆಲ ಕಾಲ ಧ್ಯಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಂತರ ಕೇಸರಿ ವಸ್ತ್ರದೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

Share Post