Districts

ಕರಾವಳಿಯಲ್ಲಿ ಹೆಚ್ಚಿದ ಮಳೆ ಹಾನಿ; ಉಡುಪಿಯಲ್ಲಿ ಸಿಎಂ ಸಭೆ

ಉಡುಪಿ; ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದೆ. ಹಲವು ಮನೆಗಳು ಕುಸಿದುಬಿದ್ದಿವೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಶೀಘ್ರವಾಗಿ ಪರಿಹಾರ ಒದಗಿಸುವ ಸಲುವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು ಉಡುಪಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಕರಾವಳಿ ಜಿಲ್ಲೆಗಳ ಎಲ್ಲಾ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಕರಾವಳಿ ಜಿಲ್ಲೆಯಲ್ಲಿ ಎಷ್ಟು ಮಳೆಹಾನಿ ಸಂಭವಿಸಿದೆ. ಪರಿಹಾರ ಕಾರ್ಯಗಳು ಯಾವು ರೀತಿ ನಡೆಯುತ್ತಿವೆ. ಎಂಬುದರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಸಭೆಯಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌ ಭಾಗಿಯಾಗಿದ್ದಾರೆ. ಸಿಎಂ ಬೊಮ್ಮಾಯಿಯವರು ನಿನ್ನೆಯಿಂದ ಮಳೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡಿದ್ದಾರೆ.

Share Post