DistrictsLifestyle

ಸಿದ್ದಗಂಗಾ ಮಠದಲ್ಲಿ ಬೊಮ್ಮಾಯಿ ಲಕ್ಷ ಬಿಲ್ವಾರ್ಚನೆ

ತುಮಕೂರು: ಸಿದ್ದಗಂಗಾ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿದ್ದರು. ಪತ್ನಿ ಸಮೇತ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ, ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ ಬವಸರಾಜ ಬೊಮ್ಮಾಯಿ ದಂಪತಿ ಶಿವಕುಮಾರ ಶ್ರೀಗಳು ಗದ್ದುಗೆಗೆ ಲಕ್ಷ ಪುಷ್ಪ ಬಿಲ್ವಾರ್ಚನೆ ಮಾಡಿದರು. ಕೊನೆಯ ಕಾರ್ತೀಕ ಸೋಮವಾರ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಶ್ರೀಮಠಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಸಚಿವರಾದ ಬಿ.ಸಿ.ನಾಗೇಶ್, ಜೆಸಿ ಮಾಧುಸ್ವಾಮಿ ಹಾಜರಿದ್ದರು. ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು.

Share Post