Districts

ಶಾಲೆಗಳ ಪುನಾರಂಭ ನಮ್ಮ ಮೊದಲ ಆದ್ಯತೆ, 25ರಬಳಿಕ ಬಜೆಟ್‌ ಬಗ್ಗೆ ಅಂತಿಮ ನಿರ್ಧಾರ-ಸಿಎಂ

ಬೆಳಗಾವಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಕೂಡ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ನಮ್ಮ ಗುರಿ. ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭ ಮಾಡಬೇಕು. ಶಾಲೆಗಳ ಪುನಾರಂಭ ಮಾಡುವುದು ನಮ್ಮ ಮೊದಲ ಆದ್ಯತೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ತಿಳಿಸಿದ್ರು.

ಇನ್ನೂ ಬಜೆಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕ್ರಿಯೆ ಶುರುವಾಗಿದ್ದು, ಹಲವಾರು ಇಲಾಖೆಗಳ ಸಭೆ ನಡೆಸಲಾಗಿದೆ. ಸೋಮವಾರ, ಮಂಗಳವಾರ ಮತ್ತೆಮ್ಮೊ ಸಭೆ ನಡೆಸಿ ಅಂತಿಮವಾಗಿ ಎಲ್ಲಾ ಇಲಾಖೆಗಳ ಬೇಡಿಕೆಗಳನ್ನು ಗಮನಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗಮನಿಸಿ ಮುಂದಿನ ಬಜೆಟ್‌ ಅನ್ನು ಮಾಡಲಾಗುತ್ತದೆ. ನಮ್ಮ ಆರ್ಥಿಕ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಲಾಗುತ್ತದೆ. ಬಜೆಟ್‌ನಲ್ಲಿ ಏನಾಗುತ್ತದೆ ಎಂದು ಪ್ರಸ್ತುತ ಹೇಳಲಿಕ್ಕೆ ಬರುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

 

Share Post