DistrictsPolitics

ಮೊಟ್ಟೆ ಜೊತೆ ಕಲ್ಲು ಎಸೆದಿದ್ದರು; ಸಿದ್ದರಾಮಯ್ಯ ಹೇಳಿಕೆ ಶುದ್ಧ ಸುಳ್ಳು ಎಂದ ಸಿಎಂ

ದೇವನಹಳ್ಳಿ; ಮಡಿಕೇರಿ ಭೇಟಿ ವೇಳೆ ಮೊಟ್ಟೆ ಜೊತೆ ಬಟ್ಟೆಯಲ್ಲಿ ಸುತ್ತಿ ಕಲ್ಲು ಕೂಡಾ ಎಸೆದಿದ್ದರು ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಹೇಳುತ್ತಿರುವುದು ಶುದ್ಧ ಸುಳ್ಳು ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಸ್ಥಾನ, ಗೌರವದ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಅವರಿಗೆ ಹೆಚ್ಚಿನ ಭದ್ರತೆ ಸಹಾ ಕೊಟ್ಟಿದ್ದೇವೆ. ಸಾಕಷ್ಟು ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್‌ ನವರು. ಸಿದ್ದರಾಮಯ್ಯನವರು ಗೊಂದಲ್ಲಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಆದೇಶ ಮಾಡಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Share Post