CrimeDistricts

ಪ್ರೀತಿಗೆ ಯುವಕನ ಮನೆಯವರ ಅಡ್ಡಿ; ಮನನೊಂದು ಯುವತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ; ಪ್ರೀತಿಗೆ ಯುವಕನ ಮನೆಯವರು ಅಡ್ಡಿಪಡಿಸಿದರು ಎಂಬ ಕಾರಣಕ್ಕೆ  ಕೃಷಿ ಮಹಾವಿದ್ಯಾಲಯದ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರ ಗ್ರಾಮದ ಕೃಷಿ ಮಹಾವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಪವಿತ್ರಾ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅಂತಿಮ ವರ್ಷದಲ್ಲಿ ಬಿಎಸ್‌ಸಿ ಕೃಷಿ ವ್ಯಾಸಂಗ ಮಾಡ್ತಿದ್ದ ಪವಿತ್ರಾ ಕಾಲೇಜಿನ ವಸತಿನಿಲಯದಲ್ಲೇ ನೇಣು ಬಿಗಿದುಕೊಂಡಿದ್ದಾಲೆ.  ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟು ಮೊಬೈಲ್‌ನಲ್ಲಿ ವೀಡಿಯೋ ಸಹ ಮಾಡಿದ್ದಾಳೆ.

ನನಗೆ ಅಪರಿಚಿತ ಯುವಕನ ಮೊಬೈಲ್ ನಂಬರ್ ಸಿಕ್ಕಿ ಆತನೊಂದಿಗೆ ಪರಿಚಯವಾಗಿ ಪ್ರೇಮವಾಗಿತ್ತು. ಆತ ಒಳ್ಳೆಯವನೆಂದು ಭಾವಿಸಿದ್ದೆ, ಆದ್ರೆ ಅವನು ಒಳ್ಳೆಯವನಲ್ಲ ಪರಿಚಯವಾದ ಕೆಲವೇ ದಿನಗಳಲ್ಲಿ ರೂಂ ಗೆ ಕರೆದಿದ್ದ. ನಂತರ ನಾನು ಆತನೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದೆ. ಅದರೂ ಅವನು ಮತ್ತೆ ಮತ್ತೆ ಫೋನ್‌ಕಾಲ್, ಮೆಸೇಜ್ ಮಾಡುತ್ತಿದ್ದ. ಮತ್ತೆ ಪ್ರೇಮ ಶುರುವಾಗಿ ಆತನೇ ಪ್ರಪಂಚ ಎಂಬಂತಾಗಿತ್ತು. ಈ ವಿಚಾರ ಯುವಕನ ಮನೆಯಲ್ಲಿ ಗೊತ್ತಾಗಿ ಅವನ ಅಕ್ಕ ನನಗೆ ಕರೆ ಮಾಡಿ, ಬೈದಿದ್ದರು ಎಂದು ವಿದ್ಯಾರ್ಥಿನಿ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.

Share Post